ಕೋಲಾರ: ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಜ.19ರವರೆಗೆ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವ ಕಾರಣ ಜಿಲ್ಲೆಯಾದ್ಯಂತ ಎಲ್ಲಾ ಜಾತ್ರೆ, ವಿಶೇಷ ಉತ್ಸವ ಹಾಗೂ ವೈಕುಂಠ ಏಕಾದಶಿ ಆಚರಣೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ವೈಕುಂಠ ಏಕಾದಶಿ ಪ್ರಯುಕ್ತ ಜಿಲ್ಲಾ ಕೇಂದ್ರದ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಜ.13ರಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಸಾಧ್ಯತೆಯಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ದೇವರ ದರ್ಶನಕ್ಕೆ ಅವಕಾಶ ನೀಡುವಂತೆ ಸಾರ್ವಜನಿಕರಿಗೆ ಮನವಿ ಬಂದಿತ್ತು.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ (Basavaraj Bommai) ಕೊರೊನಾ ಸೋಂಕು ದೃಢವಾಗಿದೆ (Covid19 Positive). ಹೋಮ್ ಕ್ವಾರಂಟೈನ್ನಲ್ಲಿರುವ ಬಸವರಾಜ ಬೊಮ್ಮಾಯಿ, ನಾನು ಆರೋಗ್ಯವಾಗಿದ್ದೇನೆಂದು ತಿಳಿಸಿ ಟ್ವೀಟ್ ಮಾಡಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ (Coronavirus) ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿ ಮನವಿ ಮಾಡಿಕೊಂಡಿದ್ದಾರೆ. ಸಿಎಂ ಬೊಮ್ಮಾಯಿ ಕೊವಿಡ್ ಪಾಸಿಟಿವ್ ಆಗಿರುವ ಹಿನ್ನೆಲೆ ಸಿಎಂ ಅಧಿಕೃತ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ನಿಗದಿಯಾಗಿದ್ದ ಕಾವೇರಿ ಕಾಮಗಾರಿ ಪರಿಶೀಲನಾ ಸಭೆಗಳು…
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹಿಟ್ಲರ್ ಆಡಳಿತ ನಡೆಸುತ್ತಿದೆ: ಚನ್ನರಾಜ್ ಹಟ್ಟಿಹೊಳಿ
ಬೆಳಗಾವಿ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹಿಟ್ಲರ್ ಆಡಳಿತ ನಡೆಸುತ್ತಿದೆ ಎಂದು ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹಿಟ್ಲರ್ ಆಡಳಿತ ನಡೆಸುತ್ತಿದೆ. ಎಲ್ಲ ವಿಚಾರಗಳಲ್ಲೂ ಬಿಜೆಪಿ ಸರ್ಕಾರ ವಿಫಲವಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಜನರು ರೋಸಿ ಹೋಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸಲಿದೆ. ಜನರಿಗಾಗಿ ಮೇಕೆದಾಟು ಯೋಜನೆ ಜಾರಿಗೆ ತರುವಂತೆ ಆಗ್ರಹಿಸಿ ಪಾದಯಾತ್ರೆ…
ಮುಸ್ಲಿಂ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!
ಬೆಂಗಳೂರಿನಂತಹ ಮಹಾನಗರದಲ್ಲಿ ಕೋಟ್ಯಾಂತರ ಜನ ವಿವಿಧ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಮೂರು ಹೊತ್ತಿನ ತಮ್ಮ ಹೊಟ್ಟೆ ತುಂಬಿಕೊಳ್ಳಲು ಶ್ರಮ ಹಾಕಿ ದುಡಿಯುತ್ತಿದ್ದಾರೆ. ಇನ್ನು ವಿಶೇಷ ಚೇತನರೂ ಕೂಡ ಯಾವುದಾದರೊಂದು ಗೂಡಂಗಡಿಯನ್ನು ಹಾಕಿಕೊಂಡು, ಸಣ್ಣ ಪುಟ್ಟ ವ್ಯಾಪಾರ ಮಾಡಿಯೋ ಮತ್ತಾವುದೋ ರೀತಿಯಲ್ಲಿ ದುಡಿದು ತಮ್ಮ ಬದುಕು ಸಾಗಿಸುತ್ತಿದ್ದಾರೆ.
ಇನ್ನು ಕೆಲವು ವಯೋವೃದ್ದರು ದುಡಿಯಲು ಸಾದ್ಯವಾಗದೆ, ತಮ್ಮ ಮನೆಗಳಲ್ಲೂ ಸರಿಯಾದ ಹಾರೈಕೆ ಸಿಗದವರು ದೇವಸ್ಥಾನದ ಹತ್ತಿರವೊ, ಸಿಗ್ನಲ್ ಗಳಲ್ಲಿಯೋ ಬಿಕ್ಷಾಟನೆ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ನಾವು ಇದನ್ನೆಲ್ಲಾ…
ಮಾವು ಬೆಳೆಗಾರರಿಗೆ ಸಿಹಿ ಸುದ್ದಿ – ಶೀಘ್ರವೇ ಭಾರತದ ಮಾವು ಅಮೆರಿಕಾಗೆ ರಫ್ತು
ನವದೆಹಲಿ: ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಮಾವು ಮತ್ತು ಉಪ ಉತ್ಪನ್ನಗಳನ್ನು ರಫ್ತು ಮಾಡುವ ಕಾರ್ಯಕ್ಕೆ ಶೀಘ್ರವೇ ಚಾಲನೆ ಸಿಗಲಿದೆ. ಮಾವು ರಫ್ತುಗೆ ಸಂಬಂಧಿಸಿದಂತೆ ಭಾರತ ಮತ್ತು ಯುಎಸ್ ನಿಯಮಗಳನ್ನು ಸರಳಗೊಳಿಸಲು ಒಪ್ಪಿಕೊಂಡಿವೆ ಎಂದು ಆಹಾರ ಉತ್ಪನ್ನಗಳ ರಫ್ತು ಉತ್ಪನ್ನಗಳ ರಫ್ತಿನ ಜವಾಬ್ದಾರಿ ಹೊತ್ತಿರುವ ಸಂಸ್ಥೆ `ಅಪೆಡಾ’ ತಿಳಿಸಿದೆ.
ಇನ್ನು ನಾಲ್ಕು ತಿಂಗಳಲ್ಲಿ ಮಾವಿನ ಋತು ಆರಂಭವಾಗಲಿದೆ. ಈ ಹೊತ್ತಿನಲ್ಲೇ ಭಾರತವು ಯುಎಸ್ಗೆ ಮಾವು ರಫ್ತು ಮಾಡುವ ಬಗ್ಗೆ ಒಪ್ಪಂದ…
ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಓಟ ಮುಂದುವರಿದಿದ್ದು, ಹೊಸದಾಗಿ 83 ಮಂದಿಗೆ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ತ್ರಿಶತಕದ ಗಡಿ ದಾಟಿದೆ.
ಕೋಲಾರ ತಾಲ್ಲೂಕಿನ 30 ಮಂದಿಗೆ, ಮಾಲೂರು ತಾಲ್ಲೂಕಿನ 10 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 7 ಮಂದಿಗೆ, ಕೆಜಿಎಫ್ ತಾಲ್ಲೂಕಿನ 12 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 23 ಮಂದಿಗೆ ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ಹರಡಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 303ಕ್ಕೆ ಜಿಗಿದಿದೆ.
ಕೋಲಾರ: ನಗರದ ಹೊರವಲಯದ ತೇರಹಳ್ಳಿಯಲ್ಲಿ ಎರಡು ಕೋಮುಗಳ ನಡುವೆ ಶನಿವಾರ ರಾತ್ರಿ ನಡೆದ ಘರ್ಷಣೆ ಪ್ರಕರಣವು ತಿರುವು ಪಡೆದಿದ್ದು, ಘಟನೆ ಸಂಬಂಧ ದೂರು ಹಾಗೂ ಪ್ರತಿದೂರು ದಾಖಲಾಗಿದೆ.
ತೇರಹಳ್ಳಿಯ ಸ್ಥಳೀಯರು ತಮ್ಮ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದರು ಎಂದು ಆರೋಪಿಸಿ ನಗರದ ಕೆ.ಜಿ.ಮೊಹಲ್ಲಾ ನಿವಾಸಿ ರೋಮನಾ ಮಹಮದಿ ಅವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅತ್ತೆ ಫಾಹಿಮಾ, ಅತ್ತಿಗೆಯರಾದ ನವೀದಾ, ಶಾಹಿರಾ ಭಾನು ಹಾಗೂ ಚಾಲಕ ಲಿಯಾಕತ್ ಜತೆ ಶನಿವಾರ ರಾತ್ರಿ ತೇರಹಳ್ಳಿ ಬೆಟ್ಟದ…
ರಾಜ್ಯದಲ್ಲಿ ಮೊದಲ ಬಾರಿಗೆ 12,000 ದಾಟಿದ ಸೋಂಕು- ನಾಲ್ವರು ಸಾವು
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ವಿಜೃಂಭಣೆ ಮುಂದುವರೆದಿದೆ. ರಾಜ್ಯದಲ್ಲಿಂದು 10 ಸಾವಿರಕ್ಕೂ ಹೆಚ್ಚು ಕೇಸ್ ವರದಿ ಆಗಿದೆ. ಇಂದು ಬರೋಬ್ಬರಿ 12,000 ಕೇಸ್ ಬಂದಿದೆ. ಬೆಂಗಳೂರಲ್ಲಿ ಹೊಸ ಕೇಸ್ಗಳ ಸಂಖ್ಯೆ 9,020ಕ್ಕೆ ಏರಿದೆ.
ರಾಜ್ಯದಲ್ಲಿ ಪಾಸಿಟಿವಿ ರೇಟ್ 6.33 ಇದೆ. ಇಂದು ರಾಜ್ಯದಲ್ಲಿ 901 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 29,63,957 ಮಂದಿ ಬಿಡುಗಡೆಗೊಂಡಿದ್ದಾರೆ.
49,602 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಬ್ಬರು ಸೇರಿ ರಾಜ್ಯದಲ್ಲಿ ಒಟ್ಟು ನಾಲ್ವರು ಮಹಾಮಾರಿಯಿಂದ…
Consumer Durables Prices To Go Up 5-10% As Makers Feel Heat Of Rising Input Costs
ನವದೆಹಲಿ (ಪಿಟಿಐ): ಹೊಸ ವರ್ಷದಲ್ಲಿ ಹವಾ ನಿಯಂತ್ರಕಗಳು ಹಾಗೂ ರೆಫ್ರಿಜರೇಟರ್ಗಳ ಬೆಲೆ ಹೆಚ್ಚಳ ಆಗಿದೆ. ಇವುಗಳ ತಯಾರಿಕೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಬೆಲೆಯಲ್ಲಿ ಏರಿಕೆ ಆಗಿರುವುದು, ಸರಕು ಸಾಗಣೆ ವೆಚ್ಚ ಜಾಸ್ತಿ ಆಗಿರುವುದು ಇದಕ್ಕೆ ಕಾರಣ.
ಈ ತಿಂಗಳ ಕೊನೆಯ ವೇಳೆಗೆ ಅಥವಾ ಮಾರ್ಚ್ಗೆ ಮೊದಲು ವಾಷಿಂಗ್ ಮೆಷಿನ್ ಬೆಲೆಯಲ್ಲಿ ಶೇಕಡ 5ರಿಂದ ಶೇ 10ರಷ್ಟು…
ಕೋಲಾರ | ಕೊರೊನಾ ಸೋಂಕಿನ ಭೀತಿ: ವಾರಾಂತ್ಯದ ಕರ್ಫ್ಯೂ ಆದೇಶಕ್ಕೆ ಜಿಲ್ಲೆ ಸ್ತಬ್ಧ
ಕೋಲಾರ: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ರಾಜ್ಯ ಸರ್ಕಾರ ವಾರಾಂತ್ಯದ ಕರ್ಫ್ಯೂ ಘೋಷಿಸಿರುವ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಇಡೀ ಜಿಲ್ಲೆ ಸಂಪೂರ್ಣ ಸ್ತಬ್ಧವಾಯಿತು.
ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಮನೆಗಳಲ್ಲೇ ಉಳಿದು ಕರ್ಫ್ಯೂಗೆ ಬೆಂಬಲ ಸೂಚಿಸಿದರು. ಹಾಲು, ತರಕಾರಿ, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಮಳಿಗೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದರು.
ಕೆಲವೆಡೆ ವರ್ತಕರು ಸ್ವಇಚ್ಛೆಯಿಂದ ಅಂಗಡಿಗಳನ್ನು ಮುಚ್ಚಿ ಕೋವಿಡ್ ವಿರುದ್ಧದ ಹೋರಾಟಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದರು.…
ಕೋಲಾರದಲ್ಲಿ ಪ್ರಯಾಣಿಕರ ಕಾರು ಅಡ್ಡಗಟ್ಟಿ ಬುರ್ಖಾ ತೆಗೆಯುವಂತೆ ಆಗ್ರಹಿಸಿ ಮಾರಣಾಂತಿಕ ಹಲ್ಲೆ, ದರೋಡೆ
ಕೋಲಾರ(09-01-2022): ಮುಸ್ಲಿಮ್ ಕುಟುಂಬ ಪ್ರಯಾಣಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಬುರ್ಖಾ ತೆಗೆಯುವಂತೆ ಆಗ್ರಹಿಸಿ ವಾಹನದಲ್ಲಿದ್ದವರನ್ನು ಎಳೆದುಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಕೋಲಾರದ ತೇರಹಳ್ಳಿಯಲ್ಲಿ ನಡೆದಿದೆ.
ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಗಾಯಗೊಂಡವರನ್ನು ತಜಮ್ಮುಲ್ ಶರೀಫ್, ಮಾಝ್ ಬೇಗ್, ಫಿರೋಝ್ ಪಾಶಾ, ಸಯೀದ್ ಪಾಶಾ, ಫಿರ್ದೌಸ್ ಪಾಶಾ, ಶೈಖ್ ಅನ್ವರ್ ಎಂಬ ಗುರುತಿಸಲಾಗಿದೆ. ಸದ್ಯ ಇವರನ್ನು ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋಲಾರದ ದರ್ಗಾಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಅವರ ವಾಹನವನ್ನು ತಡೆದು ನಿಲ್ಲಿಸಿದ ದುಷ್ಕರ್ಮಿಗಳ…
ಸಮಸ್ಯೆ ಇತ್ಯರ್ಥಕ್ಕೆ ಉಪ ತಹಶೀಲ್ದಾರ್ ನೇಮಕ: ಜಿಲ್ಲಾಧಿಕಾರಿ ಸೆಲ್ವಮಣಿ ಭರವಸೆ
ಕೋಲಾರ: ‘ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಕಾರಿಡಾರ್ ಹಾದು ಹೋಗುವ ಭಾಗದ ರೈತರ ಸಮಸ್ಯೆಗಳ ಇತ್ಯರ್ಥಕ್ಕೆ ಜಿಲ್ಲೆಯ 3 ತಾಲ್ಲೂಕುಗಳಲ್ಲಿ ಉಪ ತಹಶೀಲ್ದಾರ್ಗಳನ್ನು ನೇಮಿಸಿ ಶೀಘ್ರವಾಗಿ ಪರಿಹರಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಭರವಸೆ ನೀಡಿದರು.
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಕಾರಿಡಾರ್ ಸಂತ್ರಸ್ತರ ಹೋರಾಟ ಸಮಿತಿಯು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ರೈತ ಮುಖಂಡರು ಹಾಗೂ ಜನಪ್ರತಿನಿಧಿಗಳೊಂದಿಗೆ ಇಲ್ಲಿ ಶುಕ್ರವಾರ ಸಭೆ ನಡೆಸಿದ ಜಿಲ್ಲಾಧಿಕಾರಿ, ‘ಕಾರಿಡಾರ್ ಯೋಜನೆಯಿಂದ ಜಮೀನು ಕಳೆದುಕೊಂಡ ರೈತರ ಸಮಸ್ಯೆ ಆಲಿಸಲು ಅಧಿಕಾರಿಗಳು ಪ್ರತಿ ವಾರ…
ವೇಮಗಲ್: ಗ್ರಾಮದ ವಿವಿಧೆಡೆ ಶುಕ್ರವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳದ ಜನರಿಗೆ ಶಿಸ್ತುಕ್ರಮದ ಬಿಸಿ ಮುಟ್ಟಿಸಿದರು.
ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸರ್ಕಾರ ಆದೇಶಿಸಿದೆ. ಆದರೆ, ಸಾಕಷ್ಟು ಮಂದಿ ಈ ಆದೇಶ ಉಲ್ಲಂಘಿಸಿ ಮಾಸ್ಕ್ ಧರಿಸದೆ ಗ್ರಾಮದ ರಸ್ತೆಗಳಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದರು.
ಹೀಗಾಗಿ ಇನ್ಸ್ಪೆಕ್ಟರ್ ಶಿವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆಗಿಳಿದ ಪೊಲೀಸರು ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಜನರನ್ನು ತಡೆದು ಮಾಸ್ಕ್…
ಕೋಲಾರದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ: ಬೆಚ್ಚಿಬಿದ್ದ ಜನ, ಹಾಸಿಗೆ ಕೊರತೆ ಆತಂಕ
Coronavirus Cases Increased In Kolar Fear Of Bed Shortage
ಕೋಲಾರ: ಜಿಲ್ಲೆಯ ಪಾಲಿಗೆ ಶುಭ ಶುಕ್ರವಾರವು ಅಶುಭವಾಗಿದ್ದು, ಕೊರೊನಾ ಸೋಂಕಿನ ಮಹಾ ಸ್ಫೋಟವಾಗಿದೆ. ಒಂದೇ ದಿನ 98 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಆರೇಳು ತಿಂಗಳಿಂದ ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿರಲಿಲ್ಲ. ಬುಧವಾರ (ಜ.5) 24 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿತು. ಇದೀಗ ಶುಕ್ರವಾರ ಸೋಂಕಿನ ಮಹಾ ಸ್ಫೋಟವಾಗಿದ್ದು, ಸೋಂಕಿನ ನಾಗಾಲೋಟಕ್ಕೆ…
ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಪರಿಹಾರವಲ್ಲ. ಇನ್ನು ಯಾವತ್ತೂ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ʼಲಾಕ್ಡೌನ್ ಕಳೆದುಹೋಗಿರುವ ನೀತಿ. ಆರಂಭದ ಹಂತದಲ್ಲಿ ಕೋವಿಡ್ ಸೋಂಕು, ವೈರಾಣುವಿನ ಗುಣ ಮತ್ತು ಸ್ವಭಾವ, ಚಿಕಿತ್ಸಾ ವಿಧಾನ ಯಾವುದೂ ಗೊತ್ತಿರಲಿಲ್ಲ. ಆಗ ಅನುಭವದ ಕೊರತೆಯಿಂದ ಲಾಕ್ಡೌನ್ ಜಾರಿಗೊಳಿಸಿದ್ದೆವು. ಇನ್ನು ಹಾಗಾಗುವುದಿಲ್ಲʼ ಎಂದರು.
ಎರಡು ವರ್ಷಗಳ ಅನುಭವದಿಂದ ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸೆಯ ಕುರಿತು ಅರಿವು ಇದೆ.…
ಕೋಲಾರ: ‘ಹಾಲು ಖರೀದಿ ದರ ಇಳಿಕೆ ಮಾಡಿರುವ ಕ್ರಮ ಖಂಡಿಸಿ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಚಿಮುಲ್) ಎದುರು ಜ.11ರಂದು ಬೃಹತ್ ಪ್ರತಿಭಟನೆ ಮಾಡುತ್ತೇವೆ’ ಎಂದು ರೈತ ಸಂಘ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರೈತ ಸಂಘ, ಹಸಿರು ಸೇನೆ, ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ನೊಂದ ಹಾಲು ಉತ್ಪಾದಕರ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಅವಿಭಜಿತ ಕೋಲಾರ ಜಿಲ್ಲೆಯ ಹೈನುಗಾರರು, ಡೇರಿ ಅಧ್ಯಕ್ಷರು,…
ಕೋಲಾರದಲ್ಲಿ ಅಕ್ರಮ ಇ–ಖಾತೆ | ಹಣ ತಿನ್ನೋದಕ್ಕೆ ಬದುಕಿದ್ದೀರಾ: ಅಧಿಕಾರಿಗಳಿಗೆ ಸಂಸದ ತರಾಟೆ
ಕೋಲಾರ: ‘ಸರ್ಕಾರಿ ಜಮೀನುಗಳಿಗೆ ಅಕ್ರಮ ಖಾತೆ, ಅಗ್ರಿಮೆಂಟ್ ನಿವೇಶನಗಳಿಗೆ ಇ–ಖಾತೆ ಮಾಡಿಕೊಂಡು ಹೋದರೆ ಹೇಗೆ? ನಿಮಗೆ ಹೇಳೋರೊ ಕೇಳೋರೊ ಇಲ್ಲವೇ? ನಿಮ್ಮನ್ನು ಅಮಾನತು ಮಾಡಿದರೆ ಬುದ್ದಿ ಬರುತ್ತೆ’ ಎಂದು ಸಂಸದ ಎಸ್.ಮುನಿಸ್ವಾಮಿ ನಗರಸಭೆ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾದರು.
ಇಲ್ಲಿ ಗುರುವಾರ ನಗರಸಭೆ ಅಧಿಕಾರಿಗಳ ಸಭೆ ನಡೆಸಿದ ಸಂಸದರು, ‘ಅಕ್ರಮವಾಗಿ ಇ-ಖಾತೆ ಮಾಡಿರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ನಾನೇ ಜಿಲ್ಲಾಧಿಕಾರಿ ಅವರಿಗೆ ಸೂಚಿಸುತ್ತೇನೆ. ಇಂತಹ ಭ್ರಷ್ಟ ಅಧಿಕಾರಿಗಳಿದ್ದರೆ ಜನರ ಕೆಲಸ ಕಾರ್ಯ ಎಲ್ಲಿ ನಡೆಯುತ್ತೆ?’ ಎಂದು ಗುಡುಗಿದರು.…
PM Modi: ದೇಶದಲ್ಲಿ ತೀವ್ರ ಗತಿಯಲ್ಲಿ ಕೊವಿಡ್ ಹೆಚ್ಚಳ; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ
ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸುವ ಸಾಧ್ಯತೆಯಿದೆ. ದೇಶದಲ್ಲಿ ಕೋವಿಡ್ -19 ಪರಿಸ್ಥಿತಿ ಬಿಗಡಾಯಿಸುತ್ತಿರುವುದು ಮತ್ತು ಅದನ್ನು ಸಾಮೂಹಿಕವಾಗಿ ಎದುರಿಸುವುದು ಹೇಗೆ ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಸೋಂಕಿತ ವ್ಯಕ್ತಿಗಳಿಂದ ಇತರರಿಗೆ ಸೋಂಕು ಹರಡವುದನ್ನು ತಪ್ಪಿಸಲು ಪರೀಕ್ಷೆಗಳನ್ನು ಹೆಚ್ಚಿಸುವಂತೆ ಕೇಂದ್ರವು ಒಂಬತ್ತು ರಾಜ್ಯಗಳು ಮತ್ತು…
ಕೋಲಾರ: ‘ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ದಂದೆ ಎಗ್ಗಿಲ್ಲದೆ ನಡೆಯುತ್ತಿದ್ದು, ಇದಕ್ಕೆ 15 ದಿನದೊಳಗೆ ಕಡಿವಾಣ ಹಾಕಬೇಕು’ ಎಂದು ಸಂಸದ ಎಸ್.ಮುನಿಸ್ವಾಮಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಇಲ್ಲಿ ಗುರುವಾರ ಅಬಕಾರಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಂಸದರು, ‘ಅಕ್ರಮ ಮದ್ಯ ಹಾಗೂ ಗಾಂಜಾ ಮಾರಾಟದ ಸಂಬಂಧ ಜನರಿಂದ ದೂರು ಬಂದಿವೆ. ಗ್ರಾಮೀಣ ಭಾಗದಲ್ಲಿ ಅಧಿಕೃತ ಮದ್ಯ ಮಾರಾಟ ಅಂಗಡಿಗಳಿಗಿಂತ ಅನಧಿಕೃತ ಅಂಗಡಿಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.…
ಕೋಲಾರ: ‘ಇಲಾಖೆಯು ಜಿಲ್ಲೆಯಲ್ಲಿ ದಿನಕ್ಕೆ 2,100 ಮಂದಿಗೆ ಕೋವಿಡ್ ಪರೀಕ್ಷೆ ಮಾಡುವ ಗುರಿ ನೀಡಿದ್ದು, ಪರೀಕ್ಷೆ ನಡೆಸುತ್ತಿದ್ದೇವೆ. ಜಿಲ್ಲೆಯಲ್ಲಿ ಈವರೆಗೆ ಓಮೈಕ್ರಾನ್ ಪ್ರಕರಣ ಪತ್ತೆಯಾಗಿಲ್ಲ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ತಿಳಿಸಿದರು.
ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸೋಂಕಿತರ ಪೈಕಿ 350 ಮಂದಿಯ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಪೈಕಿ 125 ಮಾದರಿಗಳ ವರದಿ ಬಂದಿಲ್ಲ’ ಎಂದು ಮಾಹಿತಿ ನೀಡಿದರು.